Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:3 - ಕನ್ನಡ ಸಮಕಾಲಿಕ ಅನುವಾದ

3 ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅದ್ದಿ ಹೆರೊದಾನ್ ಜುವಾಂವಾಕ್ ಧರುನ್ ಹಾನುಕ್ ಹುಕುಮ್ ದಿಲ್ಲ್ಯಾನ್ ಅನಿ ತೆಕಾ ಸರ್‍ಪೊಳಿನಿ ಭಾಂದುನ್ ಬಂದಿಖಾನ್ಯಾತ್ ಘಾಟಲ್ಲ್ಯಾನ್. ತೆಚ್ಯಾ ಭಾವಾಚ್ಯಾ ಪಿಲಿಪಾಚ್ಯಾ ಬಾಯ್ಕೊಕ್ ಹೆರೊದಿಯಾಸಾಕ್ ಲಾಗುನ್ ತೆನಿ ಅಶೆ ಕರಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:3
18 ತಿಳಿವುಗಳ ಹೋಲಿಕೆ  

ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.


ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.


ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ,


ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.


ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,


ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.


ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.


ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.


ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.


ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು