Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:31 - ಕನ್ನಡ ಸಮಕಾಲಿಕ ಅನುವಾದ

31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತಾಬೊಡ್ತೊಬ್ ಜೆಜು ತೆಚೆಕ್ಡೆ ಯೆಲೊ ಅನಿ ತೆಕಾ ಧರ್‍ಲ್ಯಾನ್. ಅನಿ, “ಕವ್ಡೊ ಕಮಿ ವಿಶ್ವಾಸ್ ತುಜೊ! ತಿಯಾ ಕಶ್ಯಾಕ್ ಸಂಶೆವ್ ಕರ್‍ಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:31
23 ತಿಳಿವುಗಳ ಹೋಲಿಕೆ  

ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.


ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.


ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.


ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.


ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.


ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.


ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು