Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಬಾಯ್ಕೊಮನ್ಸಿನ್,“ತಿಯಾ ಸಾಂಗ್ತಲೆ ಸಮಾ ಹಾಯ್ ಧನಿಯಾ; ಖರೆ ಅಪ್ನಾಚ್ಯಾ ಧನಿಯಾಚೆ ಹುರಲ್ಲೆ ಉಸ್ಟೆ ತರ್‍ಬಿ ಕುತ್ರಿ ಖಾತ್ಯಾತ್ ನ್ಹಯ್”. ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:27
24 ತಿಳಿವುಗಳ ಹೋಲಿಕೆ  

ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.


ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.


ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು