Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:11 - ಕನ್ನಡ ಸಮಕಾಲಿಕ ಅನುವಾದ

11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆಜಾಲ್ಯಾರ್ ತುಮ್ಕಾ ಮಿಯಾ ಭಾಕ್ರಿಚ್ಯಾ ವಿಶಯಾತ್ ಬೊಲಿನಾ ಹೊಲಾ ಮನುನ್ ತುಮ್ಕಾ ಅಜುನ್ಬಿ ಕಶ್ಯಾಕ್ ಕಳಿನಾ? ಫಾರಿಜೆವಾಂಚ್ಯಾ ಅನಿ ಸಾದುಸೆವಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:11
10 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?


ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.


ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.


ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು