Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:20 - ಕನ್ನಡ ಸಮಕಾಲಿಕ ಅನುವಾದ

20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಮಿಯಾಚ್ ಕ್ರಿಸ್ತ್ ಮನುನ್ ಕೊನಾಕ್‍ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:20
16 ತಿಳಿವುಗಳ ಹೋಲಿಕೆ  

ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು.


ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.


ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,


ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.


ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು