Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:27 - ಕನ್ನಡ ಸಮಕಾಲಿಕ ಅನುವಾದ

27 ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ಭರುನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆತಲೊ ಹಾಯ್ ಅನಿ ತನ್ನಾ ತೊ ಸಗ್ಳ್ಯಾಕ್ನಿ ತೆಂಚ್ಯಾ ಕರ್ನಾಂಚ್ಯಾ ಪರ್‍ಕಾರ್ ತೆಂಕಾ-ತೆಂಕಾ ಭೊಮಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:27
45 ತಿಳಿವುಗಳ ಹೋಲಿಕೆ  

ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.


ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.


ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು