Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತ್ಯಾ ಗಿರ್‍ಯಾಕ್ ಭಾಯ್ರ್ ಯೆವ್ಕ್ ಸಾಂಗ್ಲ್ಯಾನ್ ಅನಿ ತೊ ಗಿರೊ ತ್ಯಾ ಪೊರಾತ್ನಾ ಭಾಯ್ರ್ ಗೆಲೊ, ಅನಿ ತಾಬೊಡ್ತೊಬ್ ತೊ ಪೊರ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:18
15 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.


ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.


ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.


ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.


ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.


ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.


ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು