Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:20 - ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್, “ವಿಶ್ವಾಸ್ ಕಮಿ ಹೊತ್ತ್ಯಾಕ್ ತುಮ್ಕಾ ಸೊಡ್ಸುಕ್ ಹೊವ್ಕ್ ನಾ. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾಸಾವಾಚ್ಯಾ ಭ್ಹಿಂಯಾ ತವ್ಡೊ ವಿಶ್ವಾಸ್ ತುಮ್ಕಾ ರ್‍ಹಾಲ್ಯಾರ್ ತುಮಿ ಹ್ಯಾ ಮಡ್ಡಿಕ್ ಹಿತ್ನಾ-ಥೈ ಜಾವ್ನ್ ರ್‍ಹಾ! ಮನುನ್ ಸಾಂಗಟ್ಲ್ಯಾರ್ ತಿ ಜಾತಾ, ತುಮಿ ಕಾಯ್ ಪಾಜೆ ತೆ ಕರುಕ್ ಹೊತಾ,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:20
19 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.


ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.


ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.


ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.


ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ.


ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.


ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.


ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು