Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:23 - ಕನ್ನಡ ಸಮಕಾಲಿಕ ಅನುವಾದ

23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ತೆಕಾ ಜಿವಾನಿ ಮಾರ್‍ತ್ಯಾತ್, ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ತನ್ನಾ ಶಿಸಾಕ್ನಿ ಲೈ ಬೆಜಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:23
18 ತಿಳಿವುಗಳ ಹೋಲಿಕೆ  

ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.


ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು