Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:27 - ಕನ್ನಡ ಸಮಕಾಲಿಕ ಅನುವಾದ

27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:27
27 ತಿಳಿವುಗಳ ಹೋಲಿಕೆ  

ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.


ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.


ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.


ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?


ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


“ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.


“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.


ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.


“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.


ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.


ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು