Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:6 - ಕನ್ನಡ ಸಮಕಾಲಿಕ ಅನುವಾದ

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯೊ ಧನ್ ಆಯ್ಕುನ್ ಶಿಸಾ ವಾಯ್ಟ್ ಭಿಂಯಾಲೆ, ಅನಿ ತೆನಿ ಜಮ್ನಿ ವರ್‍ತಿ ಡಬ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:6
14 ತಿಳಿವುಗಳ ಹೋಲಿಕೆ  

ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು