Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:13 - ಕನ್ನಡ ಸಮಕಾಲಿಕ ಅನುವಾದ

13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಖರೆಚ್ ಸಾಂಗ್ತಾ,ತೆಕಾ ತೆ ಬಕ್ರೆ ಗಾವಲ್ಲ್ಯಾ ತನ್ನಾ, ಹುರಲ್ಲ್ಯಾ ನ್ಹವದಾರ್ ನ್ಹವ್ ಬಕ್ರ್ಯಾಂಚ್ಯಾನ್ಕಿ ಹೆ ಕಳ್ದಲ್ಲೆ ಎಕ್ ಬಕ್ರೆ ಗಾವಲ್ಲ್ಯಾ ಸಾಟ್ನಿ ತೊ ಲೈ ಮಟ್ಲ್ಯಾರ್ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:13
14 ತಿಳಿವುಗಳ ಹೋಲಿಕೆ  

ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


“ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?


ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು