Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:17 - ಕನ್ನಡ ಸಮಕಾಲಿಕ ಅನುವಾದ

17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:17
27 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಅನೇಕ ಸುಂಕದವರೂ ಪಾಪಿಗಳೆನ್ನಿಸಿಕೊಂಡವರೂ ಯೇಸುವಿನ ಉಪದೇಶವನ್ನು ಕೇಳಲು ಅವರ ಸಮೀಪಕ್ಕೆ ಬಂದರು.


ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?


ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು