Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಅಳಾಕ್ಡೆ ತೆ, ಫೆಡುಕ್ ಹೊಯ್ ಸರ್ಕೆ ಪೈಸೆ ನತ್ತೆ. ತಸೆಮನುನ್ ರಾಜಾನ್ ತೆಚೆ ರಿನ್ ಭರುನ್ ಘೆವ್‍ಸಾಟ್ನಿ ತ್ಯಾ ಅಳಾಕ್, ಅನಿ ತೆಚ್ಯಾ ಬಾಯ್ಕೊ ಪೊರಾಕ್ನಿ ಗುಲಾಮ್ ಕರುನ್ ಇಕಾ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:25
9 ತಿಳಿವುಗಳ ಹೋಲಿಕೆ  

ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.


“ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.


ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು