Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ರಾಜಾಕ್ ತ್ಯಾ ಸೆವಕಾಚೊ ಪಾಪ್ ದಿಸ್ಲೊ. ತೆಚೆಸಾಟ್ನಿ ರಾಜಾನ್ ತೆಚೆ ಸಗ್ಳೆ ರಿನ್ ಸುಟ್ ಕರ್‍ಲ್ಯಾನ್ ಅನಿ ತೆಕಾ ಸೊಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:27
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.


“ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.


ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.


ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು