Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:26 - ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುನ್ ನಿಟ್ಟ್ ತೆಂಚೆಕ್ಡೆ ಬಗಟ್ಲ್ಯಾನ್, ಅನಿ,“ ಮಾನ್ಸಾಕ್ ಹೆ ಕರುಕ್ ಹೊಯ್ನಾ ತೆ ಖರೆ ಹಾಯ್, ಖರೆ ದೆವಾಕ್ ಸಗ್ಳೆ ಕರುಕ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:26
16 ತಿಳಿವುಗಳ ಹೋಲಿಕೆ  

“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?


ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.


ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.


ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.


ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.


ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು