Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:29 - ಕನ್ನಡ ಸಮಕಾಲಿಕ ಅನುವಾದ

29 ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ಮಾಜೆಸಾಟಿ ಜೆ ಕೊನ್ ಘರಾಕ್ನಿ, ಭಾವಾಕ್ನಿ, ಭೆನಿಯಾಕ್ನಿ, ಬಾಬಾಕ್, ಬಾಯ್ಕ್, ಪೊರಾಕ್ನಿ, ಶೆತಾಕ್ನಿ ಸೊಡ್ತಾ, ತೆಂಕಾ ಸೆಂಬರ್ ವಾಟ್ಯಾನಿ ಘೆತಾ, ಅನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್‍ಬಿ ತೆಕಾ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:29
25 ತಿಳಿವುಗಳ ಹೋಲಿಕೆ  

ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು