Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:16 - ಕನ್ನಡ ಸಮಕಾಲಿಕ ಅನುವಾದ

16 ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯಾ ಭೆಟುಕ್ ಯೆಲ್ಲ್ಯಾನಿ ಅಪ್ನಾಕ್ ಪಸ್ವುಲ್ಯಾನಿ ಮನುನ್ ಹೆರೊದಾಕ್ ಕಳ್ಳೆ, ತನ್ನಾ ಹೆರೊದ್ ರಾಜಾಕ್ ಕಡ್ಕಡುನ್ ರಾಗ್ ಯೆಲೊ ತ್ಯಾ ಭೆಟುಕ್ ಯೆಲ್ಲ್ಯಾನಿಕ್ನಾ ಆಯ್ಕುನ್ ಘೆಟಲ್ಲ್ಯಾ ಎಳಾಚೊ ಅಂದಾಜ್ ಕರುನ್ ಘೆವ್ನ್ ಬೆತ್ಲೆಹೆಮಾತ್ ಅನಿ ಭೊತ್ಯಾನಿ ಹೊತ್ತ್ಯಾ ಗಾವಾನಿತ್ಲ್ಯಾ ದೊನ್ ವರ್ಸಾಚ್ಯಾ ಭುತ್ತುರ್‍ಲ್ಯಾ ಝಿಲ್ ಪೊರಾಕ್ನಿ ಜಿವಾನಿ ಮಾರಾ ಮನುನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ದಿಲ್ಯಾನ್. ಅನಿ ತೆನಿ ಸಗ್ಳ್ಯಾ ಪೊರಾಕ್ನಿ ಜಿವಾನಿ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:16
21 ತಿಳಿವುಗಳ ಹೋಲಿಕೆ  

ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಆಗ ದೆಲೀಲಳು ಸಂಸೋನನಿಗೆ, “ನೀನು ನನ್ನನ್ನು ವಂಚನೆಮಾಡಿ, ನನಗೆ ಸುಳ್ಳು ಹೇಳಿದೆ. ಈಗ ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ನನಗೆ ದಯಮಾಡಿ ತಿಳಿಸು,” ಎಂದಳು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.


ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.


ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.


ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.


ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು