Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:6 - ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಾದಾರನ್ ಪಾಚ್ ಘಂಟ್ಯಾಕ್ ತೊ ಅನಿ ಎಗ್ದಾ ಬಾಜಾರಾತ್ ಗೆಲೊ ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅನಿ ತೆಂಕಾ, ದಿಸ್ ಬರ್ ಕಾಮ್ ಕರಿನಸ್ತಾನಾ ಕಶ್ಯಾಕ್ ಎಳ್ ಹಾಳ್ ಕರುಕ್ ಲಾಗ್ಲ್ಯಾಶಿ ತುಮಿ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:6
10 ತಿಳಿವುಗಳ ಹೋಲಿಕೆ  

ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆಗ ಅವರು ಹೊರಟು ಹೋದರು. “ಅವನು ಸುಮಾರು ಹನ್ನೆರಡು ಗಂಟೆಗೂ ಅನಂತರ ಮೂರು ಗಂಟೆಗೂ ತಿರುಗಿ ಹೋಗಿ ಹಾಗೆಯೇ ಮಾಡಿದನು.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


“ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು