Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:13 - ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಂಕಾ,“ಪವಿತ್ರ್ ಪುಸ್ತಕಾತ್ ದೆವ್‍ ಮನ್ತಾ, ಮಾಜಿ ಗುಡಿ ಮಾಗ್ನಿ ಕರ್‍ತಲೆ ಘರ್ ಮನ್ತ್ಯಾತ್. ಮನುನ್ ಲಿವಲ್ಲೆ ಹಾಯ್. ಖರೆ ತುಮಿ ತೆ ಚೊರಾನಿ ನಿಪುನ್ ರ್‍ಹಾತಲೊ ಜಾಗೊ ಕರುನ್ ಟಾಕ್ಲ್ಯಾಶಿ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:13
8 ತಿಳಿವುಗಳ ಹೋಲಿಕೆ  

ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದರು.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:


ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು