Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:15 - ಕನ್ನಡ ಸಮಕಾಲಿಕ ಅನುವಾದ

15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹಿ ಸಗ್ಳಿ ವಿಚಿತ್ರ್ ಕಾಮಾ ಕರ್‍ತಲೆ ಬಗುನ್, ಅನಿ ದೆವಾಚ್ಯಾ ಗುಡಿತ್ ಪೊರಾ, “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ತಲೆ ಆಯ್ಕುನ್ ಮುಖ್ಯ ಯಾಜಕಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಲೈ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:15
20 ತಿಳಿವುಗಳ ಹೋಲಿಕೆ  

ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.


ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.


ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.


ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು