Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:17 - ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:17
16 ತಿಳಿವುಗಳ ಹೋಲಿಕೆ  

ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.


ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.


ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.


ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು.


ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,


ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.


ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,


ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದರು.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು