Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:28 - ಕನ್ನಡ ಸಮಕಾಲಿಕ ಅನುವಾದ

28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅತ್ತಾ ತುಮಿ ಕಾಯ್ ಮನ್ತ್ಯಾಶಿ? ಎಗ್ದಾ ಎಕ್ ಮಾನುಸ್ ಹೊತ್ತೊ, ತೆಕಾ ದೊನ್ ಲೆಕಾ ಹೊತ್ತಿ. ತೊ ಮೊಟ್ಯಾ ಲೆಕಾಕ್ಡೆ ಜಾತಾ ಅನಿ,“ಲೆಕಾ ಆಜ್ ತಿಯಾ ದರಾಕ್ಷಿಚ್ಯಾ ಮಳ್ಯಾತ್ ಜಾ ಅನಿ ಕಾಮ್ ಕರ್”. ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:28
13 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.


ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.


ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.


ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


“ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು