Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:33 - ಕನ್ನಡ ಸಮಕಾಲಿಕ ಅನುವಾದ

33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:33
23 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.


ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.


“ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:


‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.


ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು