Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:35 - ಕನ್ನಡ ಸಮಕಾಲಿಕ ಅನುವಾದ

35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಗುತ್ಕೆ ಧರಲ್ಲ್ಯಾನಿ ತ್ಯಾ ಆಳಾಕ್ನಿ ಧರ್‍ಲ್ಯಾನಿ, ಅನಿ ಎಕ್ಲ್ಯಾಕ್ ಮಾರ್ ಘಾಟ್ಲ್ಯಾನಿ, ದುಸ್ರ್ಯಾಕ್ ಜಿವಾನಿಚ್ ಮಾರ್‍ಲ್ಯಾನಿ, ಅನಿ ಅನಿಎಕ್ಲ್ಯಾಕ್ ಗುಂಡ್ಯಾನಿ ಮಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:35
23 ತಿಳಿವುಗಳ ಹೋಲಿಕೆ  

“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು