Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:41 - ಕನ್ನಡ ಸಮಕಾಲಿಕ ಅನುವಾದ

41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ತೆನಿ, “ತೊ ಯೆವ್ನ್ ತ್ಯಾ ಬುರ್ಶ್ಯಾ ಗುತ್ಕೆ ಧರಲ್ಲ್ಯಾಕ್ನಿ ಖರೆಚ್ ಜಿವಾನಿ ಮಾರ್‍ತಾ ಅನಿ ಅಪ್ನಾಚೆ ಶೆತ್ ಸುಗ್ಗಿಕ್ ಅಪ್ನಾಚೊ ವಾಟೊ ದಿತಲ್ಯಾ ದುಸ್ರ್ಯಾ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾಕ್ ದಿತಾ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:41
38 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.


ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


“ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು