Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:17 - ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:17
18 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.


ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.


ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.


ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.


ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.


ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.


ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು