Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:46 - ಕನ್ನಡ ಸಮಕಾಲಿಕ ಅನುವಾದ

46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಹಿತ್ತೆ ಜೆಜುಕ್ ಜಬಾಬ್ ದಿವ್ಕ್ ಕೊನಾಕ್ಬಿ ಹೊವ್ಕ್ ನಾ. ತ್ಯಾ ದಿಸಾಕ್ನಾ ಜೆಜುಕ್ ಸವಾಲ್ ಇಚಾರುಕ್ ಕೊನಾಕ್ಬಿ ಧೈರೊ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:46
12 ತಿಳಿವುಗಳ ಹೋಲಿಕೆ  

ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.


ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.


ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.


ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.


ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.


ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.


‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.


ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು