Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:13 - ಕನ್ನಡ ಸಮಕಾಲಿಕ ಅನುವಾದ

13 “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಲೊಕಾ ಸರ್‍ಗಾಚ್ಯಾ ರಾಜಾತ್ ಜಾತಾನಾ ತುಮಿ ತೆಂಕಾ ದಾರ್ ಬಂದ್ ಕರುನ್ ಥವ್ತ್ಯಾಶಿ, ತುಮಿಬಿ ತ್ಯಾತುರ್ ಭುತ್ತುರ್ ಗುಸಿನ್ಯಾಸಿ ಅನಿ ಗುಸುಕ್ ಮನುನ್ ಖಟ್ಪಟ್ತಲ್ಯಾಕ್ನಿಬಿ ತ್ಯಾತುರ್ ಭುತ್ತುರ್ ಗುಸುಕ್ ದಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:13
25 ತಿಳಿವುಗಳ ಹೋಲಿಕೆ  

“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


“ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು