Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:15 - ಕನ್ನಡ ಸಮಕಾಲಿಕ ಅನುವಾದ

15 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಎಕ್ ಮಾನ್ಸಾಕ್ ತುಮ್ಚ್ಯಾ ಶಾಸ್ತರಾ ಸರ್ಕೆ ಚಲಿ ಸರ್ಕೆ ಕರುಕ್ ಮನುನ್ ಸಮುಂದರಾಂಚಿ ಸಮುಂದರಾ ದಾಟುನ್ ತುಮಿ ಜಾತ್ಯಾಶಿ, ಅನಿ ಕೊನ್ಬಿ ಎಕ್ಲೊ ಗಾವ್ಲೊ ತರ್ ತೆಕಾಬಿ ತುಮ್ಚ್ಯಾನ್ ದೊನ್‍ಪಟ್ ನರ್‍ಕಾತ್ ತೆಕಾ ಶಿಕ್ಷಾ ಗಾವುಚಿ ತವ್ಡೆ ಬುರ್ಶೆಪಾನ್ ಶಿಕ್ವುತ್ಯಾಶಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:15
17 ತಿಳಿವುಗಳ ಹೋಲಿಕೆ  

ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.


ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು