Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆನಿ ಕಾಯ್ ಕರುಚೆ ಮನುನ್ ಸಾಂಗ್ತ್ಯಾತ್ ತೆ ಸಗ್ಳೆ ತುಮಿ ಕರಾ ಅನಿ ಪಾಳಾ; ಖರೆ ತೆಂಚ್ಯಾ ಚಲ್ನುಕಿ ಸರ್ಕೆ ತುಮಿ ಚಲುನಕಾಶಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಶಿಕ್ವುತಾತ್ ಖರೆ ತೆಚ್ಯಾ ಸರ್ಕೆ ಚಲಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:3
16 ತಿಳಿವುಗಳ ಹೋಲಿಕೆ  

ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


“ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.


ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.


ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು