Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:21 - ಕನ್ನಡ ಸಮಕಾಲಿಕ ಅನುವಾದ

21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ತನ್ನಾ ಯೆತಲೊ ಕಸ್ಟ್ ಲೈ ಮೊಟೊ ಕಸ್ಟ್ ತೊ. ಹ್ಯೊ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಅಸ್ಲೊ ಕಸ್ಟ್ ಯೆವ್ಕ್ ನಾ. ಅನಿ ಅನಿ ಫಿಡೆಬಿ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:21
20 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.


ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು