Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:36 - ಕನ್ನಡ ಸಮಕಾಲಿಕ ಅನುವಾದ

36 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ತೊ ದಿಸ್ ಅನಿ ತೊ ಎಳ್ ಕನ್ನಾ ಯೆತಾ ಮನುನ್ ದೆವಾ ಬಾಬಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನಾಕ್‍ಬಿ, ಸರ್ಗಾ ವೈಲ್ಯಾ ದುತಾಕ್ನಿ ಹೊಂವ್ದಿ, ದೆವಾಚ್ಯಾ ಲೆಕಾಕ್ ಸೈತ್ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:36
10 ತಿಳಿವುಗಳ ಹೋಲಿಕೆ  

“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


“ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು