Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:45 - ಕನ್ನಡ ಸಮಕಾಲಿಕ ಅನುವಾದ

45 “ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತಸೆ ಜಾಲ್ಯಾರ್ ಮಾಲ್ಕಾನ್ ಅಪ್ನಾಚ್ಯಾ ಹುರಲ್ಲ್ಯಾ ಆಳಾಂಚಿ ಜವಾಬ್ದಾರಿ ಘೆವ್ಕ್ ಅನಿ ತೆಂಕಾ ಎಳಾ-ಎಳಾರ್ ತೆಂಚೆ ಜೆವಾನ್ ವಾಟುನ್ ದಿವ್ಕ್ ಮನುನ್ ನೆಮಸಲ್ಲೊ ವಿಶ್ವಾಸಾಚೊ, ಅನಿ ಶಾನೊ ಸೆವಕ್ ಕೊನ್ ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:45
28 ತಿಳಿವುಗಳ ಹೋಲಿಕೆ  

“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.


ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,


ಅದಕ್ಕೆ ಆ ಮೇಲ್ವಿಚಾರಕನು, “ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಯುವತಿ.


ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು