Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:48 - ಕನ್ನಡ ಸಮಕಾಲಿಕ ಅನುವಾದ

48 ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ತೊ ಎಕ್ ವಿಶ್ವಾಸ್‍ ನಸಲ್ಲೊ ಸೆವಕ್ ಹೊವ್ನ್ ತೊ ಅಪ್ನಾಕುಚ್ ಮಾಲಿಕ್ ಯೆವ್ಕ್ ಅಜುನ್ ಲೈ ಎಳ್ ಹಾಯ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:48
18 ತಿಳಿವುಗಳ ಹೋಲಿಕೆ  

“ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.


“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.


“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು