Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:49 - ಕನ್ನಡ ಸಮಕಾಲಿಕ ಅನುವಾದ

49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ತೊ ಅಪ್ನಾಚ್ಯಾ ವಾಂಗುಡ್ಚ್ಯಾ ಅಳಾಕ್ನಿ ಮಾರುಕ್ ಲಾಗ್ತಾ, ಅನಿ ಫಿದೊಡ್ಯಾಂಚ್ಯಾ ವಾಂಗ್ಡಾ ಖಾತಲೆ-ಫಿತಲೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:49
23 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.


ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.


“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.


ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು