Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:5 - ಕನ್ನಡ ಸಮಕಾಲಿಕ ಅನುವಾದ

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಲೊಕಾ ಮಾಜ್ಯಾ ವಿಶಯಾತ್ ಬೊಲ್ತ್ಯಾತ್ ಅನಿ ಮಾಜ್ಯಾ ನಾವಾನ್ ಯೆತಾತ್ ಅನಿ “ಮಿಯಾಚ್ ಕ್ರಿಸ್ತ್!” ಮನುನ್ ಸಾಂಗುನ್ ಲೈ ಲೊಕಾಕ್ನಿ ತೆನಿ ಚುಕ್ ವಾಟೆಕ್ ನ್ಹೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:5
15 ತಿಳಿವುಗಳ ಹೋಲಿಕೆ  

ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.


ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.


ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು