Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:1 - ಕನ್ನಡ ಸಮಕಾಲಿಕ ಅನುವಾದ

1 “ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಸರ್ಗಾಚೊ ರಾಜ್ ಮಟ್ಲ್ಯಾರ್ ಅಸೊ. ಎಕ್ದಾ ಧಾ ಧೆಡ್ನಿಯಾ ಅರ್‍ತಿಯಾ ಘೆವ್ನ್ ನ್ಹವ್ರ್ಯಾಕ್ ಭೆಟುಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:1
43 ತಿಳಿವುಗಳ ಹೋಲಿಕೆ  

ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ, ಅವಳ ಸಂಗಡ ಸಖಿಯರಾದ ಕನ್ಯೆಯರು ಸಹ ಹೊರಡುವರು.


ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ.


ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.


ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.


ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


“ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.


ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.


ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು