Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:12 - ಕನ್ನಡ ಸಮಕಾಲಿಕ ಅನುವಾದ

12 “ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು - ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ನ್ಹವ್ರ್ಯಾನ್ ಭುತ್ತುರ್‍ನಾ ಜಬಾಬ್ ದಿವ್ನ್. ನಾ ಹೊಯ್ನಾ! ತುಮಿ ಕೊನ್ ಮನುನ್ ಮಾಕಾ ಖರೆಚ್‍ಬಿ ಗೊತ್ತ್ ನಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:12
12 ತಿಳಿವುಗಳ ಹೋಲಿಕೆ  

ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


“ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು