Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:8 - ಕನ್ನಡ ಸಮಕಾಲಿಕ ಅನುವಾದ

8 ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ್ಗೆ ಬುದ್ಧಿಯಿಲ್ಲದವರು ಬುದ್ಧಿವಂತೆಯರಿಗೆ - ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಬುದ್ದ್ ನಸಲ್ಲ್ಯಾ ಧೆಡ್ನಿಯಾನಿ ಬುದ್ದ್ ಅಸಲ್ಲ್ಯಾ ಧೆಡ್ನಿಯಾಕ್ನಿ ಜಾವ್ನ್, ತುಮ್ಚ್ಯಾಕ್ಡೆ ಹೊತ್ತ್ಯಾ ತೆಲಾತ್ಲೆ ಉಲ್ಲೆ ತೆಲ್ ಅಮ್ಕಾಬಿ ದಿವಾ, ಅಮ್ಚ್ಯಾ ಆರ್‍ತಿಯಾ ಇಜುನ್ ಜಾವ್ಲ್ಯಾತ್. ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:8
18 ತಿಳಿವುಗಳ ಹೋಲಿಕೆ  

“ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,


ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.


ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.


“ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?


“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.


“ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು