Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:10 - ಕನ್ನಡ ಸಮಕಾಲಿಕ ಅನುವಾದ

10 ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅದನ್ನು ತಿಳಿದು ಅವರಿಗೆ - ಈ ಸ್ತ್ರೀಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುಕ್ ತೆನಿ ಕಾಯ್ ಮನುಲ್ಯಾತ್ ಮನ್ತಲೆ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಕಶ್ಯಾಕ್ ಮನುನ್ ತುಮಿ ಹ್ಯಾ ಬಾಯ್ಕೊಮನ್ಸಿಕ್ ತರಾಸ್ ದಿವ್ಕ್ ಲಾಗ್ಲ್ಯಾಶಿ? ತೆನಿ ಮಾಜೆಸಾಟ್ನಿ ಎಕ್ ಬರೆ ಕಾಮ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:10
24 ತಿಳಿವುಗಳ ಹೋಲಿಕೆ  

ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.


ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.


ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ?


ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.


ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು