Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಶಿಸಾಕ್ನಿ,“ ಆಜ್ ಹ್ಯಾಚ್ ರಾತ್ತಿನ್ ತುಮಿ ಸಗ್ಳೆ ಜಾನಾ ಮಾಕಾ ಸೊಡುನ್ ಪಳುನ್ ಜಾತ್ಯಾಶಿ. ಪವಿತ್ರ್ ಪುಸ್ತಕಾತ್ ದೆವ್ ಮನ್ತಾ, ಮಿಯಾ ಕುರ್‍ಬುರಾಕ್ ಜಿವಾನಿ ಮಾರ್‍ತಾ ಅನಿ ತಾಂಡ್ಯಾತ್ಲಿ ಬಕ್ರಿ ಸಗ್ಳಿ ಮಾಳ್ಬರ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:31
16 ತಿಳಿವುಗಳ ಹೋಲಿಕೆ  

“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು