Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:41 - ಕನ್ನಡ ಸಮಕಾಲಿಕ ಅನುವಾದ

41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜಾಗೆ ರ್‍ಹಾವಾ ಅನಿ ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ ಪಡಿನಸ್ತಾನಾ ರ್‍ಹವ್‍ಸಾಟ್ನಿ ಮಾಗ್ನಿ ಕರಾ. ಅತ್ಮ್ಯಾಕ್ ಮನ್ ಹಾಯ್ ಹೊಯ್ ಖರೆ ಆಂಗಾಕ್ ತವ್ಡೊ ಬಳ್ ನಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:41
34 ತಿಳಿವುಗಳ ಹೋಲಿಕೆ  

“ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


“ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.


ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು