Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:1 - ಕನ್ನಡ ಸಮಕಾಲಿಕ ಅನುವಾದ

1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಕ್ಕಾಳಿ ಫಿಡೆ ಸಗ್ಳ್ಯಾ ಮುಖ್ಯ ಯಾಜಕಾನಿ ಅನಿ ಜುದೆವ್ ಲೊಕಾಂಚ್ಯಾ ಜಾನ್ತ್ಯಾನಿ ಮಿಳುನ್ ಜೆಜುಕ್ ಕಶೆ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:1
16 ತಿಳಿವುಗಳ ಹೋಲಿಕೆ  

ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.


ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ


ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಒಳಸಂಚು ಮಾಡುವವರು ಕೂಡಿಕೊಂಡು ದುರಾಲೋಚನೆ ಮಾಡುತ್ತಾರೆ.


ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು