Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಮಹಾಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಮುಖ್ಯ ಯಾಜಕಾನಿ ಅನಿ ಜಾನ್ತ್ಯಾನಿ ತೆಚೆ ವರ್‍ತಿ ಅಪ್ವಾದಾ ಘಾಲ್ತಾನಾ ತೆನಿ ಕಾಯ್ಬಿ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:12
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.


ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.


ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು