Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:19 - ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:19
28 ತಿಳಿವುಗಳ ಹೋಲಿಕೆ  

ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.


ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.


ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.


ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಹೀಗೆ ಅವನು ಅವರನ್ನು ನ್ಯಾಯಸ್ಥಾನದಿಂದ ಹೊರಗೆ ಕಳುಹಿಸಿಬಿಟ್ಟನು.


ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.


ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.


ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.


ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು