Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹಿಕ್ಡಿ ಮುಖ್ಯ ಯಾಜಕಾನಿ ಅನಿ ಜಾನ್ತ್ಯಾನಿ ಲೊಕಾಂಚ್ಯಾ ತಾಂಡ್ಯಾಕ್, ಬಾರಾಬ್ಬಾಸಾಕ್ ಸೊಡ್ ಅನಿ ಜೆಜುಕ್ ಕುರ್ಸಾರ್ ಮಾರ್ ಮನುನ್ ಪಿಲಾತಾಕ್ಡೆ ಮಾಗಾ ಮನುನ್ ಸಾಂಗುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:20
10 ತಿಳಿವುಗಳ ಹೋಲಿಕೆ  

ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.


ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.


ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.


ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು