Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:24 - ಕನ್ನಡ ಸಮಕಾಲಿಕ ಅನುವಾದ

24 ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಬಗುನ್ ಪಿಲಾತಾನ್ ಅನಿ ಫಿಡೆ ಬೊಲುನ್ ಉಪ್‌ಯೊಗ್ ನಾ, ಬೊಲ್ಲ್ಯಾರ್ ಡಂಗೊ ಉಟ್ಲ್ಯಾರ್‍ಬಿ ಉಟ್ಲೊ ಮನುನ್ ಯವ್ಜುನ್, ತೆನಿ ಉಲ್ಲೆ ಪಾನಿ ಘೆಟ್ಲ್ಯಾನ್ ಅನಿ ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಅಪ್ನಾಚಿ ಹಾತಾ ಧುವ್ನ್ ಘೆಟ್ಲ್ಯಾನ್, ಅನಿ, “ಹ್ಯಾ ಮಾನ್ಸಾಚ್ಯಾ ಮರ್‍ನಾಕ್ ಮಿಯಾ ಕಾರನ್ ನ್ಹಯ್! ತುಮಿಚ್ ತೆ ಬಗುನ್ ಘೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:24
16 ತಿಳಿವುಗಳ ಹೋಲಿಕೆ  

ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,


ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.


ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು