Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:46 - ಕನ್ನಡ ಸಮಕಾಲಿಕ ಅನುವಾದ

46 ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಸುಮಾರ್ ತಿನ್ ಘಂಟ್ಯಾಕ್ ಜೆಜುನ್,“ಎಲಿ ಎಲಿ ಲಾಮಾ ಸಬಾಕ್ತಾನಿ?” ಮನುನ್ ಬೊಬ್ ಮಾರ್‍ಲ್ಯಾನ್. ತಸೆಮಟ್ಲ್ಯಾರ್, ಮಾಜ್ಯಾ ದೆವಾ, ಮಾಜ್ಯಾ ದೆವಾ ತಿಯಾ ಮಾಕಾ ಕಶ್ಯಾಕ್ ಇಸರ್‍ಲೆ? ಮನುನ್ ಅರ್ತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:46
9 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.


ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.


ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.


ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು