Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:5 - ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:5
12 ತಿಳಿವುಗಳ ಹೋಲಿಕೆ  

ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.


ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು